ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ಧ ಸಹಕಾರಿ ವಾರ್ಷಿಕ ಮಹಾಸಭೆ

0


ಬಂಟ್ವಾಳ : ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ಧ ಸಹಕಾರಿ ಬಿ.ಸಿ.ರೋಡ್ ಇದರ ವಾರ್ಷಿಕ ಮಹಾಸಭೆ ಸೆ. 2ರಂದು ಸಹಕಾರಿಯ ಅಧ್ಯಕ್ಷ ರಾಜಾ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡ್ ರಂಗೋಲಿ ಸಭಾಂಗಣದಲ್ಲಿ ನಡೆಯಿತು. ಸಂಘವು ಪ್ರಸ್ತುತ ತಾಲೂಕು ಮಟ್ಟದ ವ್ಯಾಪ್ತಿ ಹೊಂದಿದ್ದು ಅದನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸುವ ಬಗ್ಗೆ, ವಾರ್ಷಿಕ ಲಾಭವನ್ನು ಸಂಘದ ಕಟ್ಟಡ ನಿಧಿಗೆ ವರ್ಗಾಯಿಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು. ಸಂಘದ ಮೂಲಕ ರೈತರಿಗೆ ನೀಡಿದ ವಿವಿಧ ಸವಲತ್ತುಗಳ ಮಾಹಿತಿಯನ್ನು ನೀಡಲಾಯಿತು.

ಪ್ರವರ್ತಕರಾದ ಪ್ರೇಮನಾಥ ಶೆಟ್ಟಿ ಅಂತರ, ಸದಾಶಿವ ಬಂಗುಳೆ, ವಿಠಲ ಬಂಗುಳೆ, ನಾಗೇಶ ಕಲ್ಯಾರು, ಶರಣಪ್ಪ ಉಮರಗಿ, ಅಂಬಿಕಾ ಅನ್ನಪೂರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಹರ್ಷಿತ್ ಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here