ಶ್ರೀರಾಮ ಪ್ರೌಢಶಾಲೆಯಲ್ಲಿ ಬಾಲಿಕಾ ಶಿಬಿರ

0

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯಲ್ಲಿ ಅ.13 ರಿಂದ ಅ.15ವರೆಗೆ ನಡೆಯುವ ಬಾಲಿಕಾ ಶಿಬಿರವನ್ನು ಮಂಗಳೂರಿನ ಅಸಿಸ್ಟೆಂಟ್ ಕಮಿಷನರ್‌ ಆಫ್ ಪೊಲೀಸ್‌ ಗೀತಾ ಕುಲಕರ್ಣಿ ದೀಪ ಪ್ರಜ್ವಲನ ಮಾಡುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್‌ಕಲ್ಲಡ್ಕಇವರು ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ರಾಷ್ಟ್ರ ಸೇವಿಕಾ ಸಮಿತಿ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯರು ಆಗಿರುವ ಕಮಲಾ ಪ್ರಭಾಕರ ಭಟ್, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕರಾದ ರಮೇಶ್‌ ಎನ್, ಪ್ರೌಢಶಾಲೆಯ ಆಡಳಿತಾಧಿಕಾರಿಯಾದ ಶಾಂಭವಿ, ಮುಖ್ಯೋಪಾಧ್ಯಾಯರಾದ ಗೋಪಾಲ ಎಂ ಹಾಗೂ ಸೆಕೆಂಡರಿ ಸ್ಕೂಲ್‌ನ ಉಪಪ್ರಾಂಶುಪಾಲರಾದ ತಿರುಮಲೇಶ್ವರ ಪ್ರಶಾಂತ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ದೀಕ್ಷಾ ನಿರೂಪಿಸಿ,ಗಾಯತ್ರಿ ಸ್ವಾಗತಿಸಿ, ಸುಮಿತ್ರಾ ವಂದಿಸಿದರು.

LEAVE A REPLY

Please enter your comment!
Please enter your name here