ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ತರಬೇತಿ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆ; ಅರ್ಜಿ ಆಹ್ವಾನ

0

ಮಂಗಳೂರು: ಬೆಂಗಳೂರಿನ ವಿದ್ಯಾನಗರದಲ್ಲಿರುವ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರದ ತರಬೇತಿ ಕೇಂದ್ರಕ್ಕೆ 2022-23ನೇ ಸಾಲಿಗೆ ಅಥ್ಲೆಟಿಕ್ಸ್, ಶೂಟಿಂಗ್ ಹಾಗೂ ಈಜು ಕ್ರೀಡೆಗಳಲ್ಲಿ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾನಗರದ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರದ ಕ್ರೀಡಾ ಶಾಲೆಯಲ್ಲಿ ಆ.23 ರಿಂದ 24ರ ವರೆಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕ್ರೀಡಾಪಟುಗಳು 2022ರ ಜುಲೈ 01ಕ್ಕೆ 14 ವರ್ಷ ಮೇಲ್ಪಟ್ಟವರಾಗಿದ್ದು, 23 ವರ್ಷದೊಳಗಿರಬೇಕು ಅರ್ಜಿ ನಮೂನೆಗಳು ಮತ್ತು ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ದೂ.ಸಂಖ್ಯೆ:0824-2451264 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here