ಬಿ.ಸಿ ರೋಡ್: ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆಗೆ ಸ್ವಾಗತ

0

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮುಖ್ಯವೃತ್ತ ಬಳಿ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ನೇತೃತ್ವದಲ್ಲಿ ಸೋಮವಾರ ಸಂಜೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕ್ರೇನ್ ಮೂಲಕ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಪ್ರತಿಮೆಗೆ ಹಾರಾರ್ಪಣೆ ನೆರವೇರಿಸಿದರು. ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ ಪೂಂಜ ಮತ್ತಿತರರು ಇದ್ದರು. ಇದೇ ವೇಳೆ ಚೆಂಡೆ ವಾದ್ಯ, ನಾಗರಿಕರಿಂದ ಪ್ರತಿಮೆಗೆ ಪುಷ್ಪಾರ್ಚನೆ, ದೇಶಭಕ್ತಿ ಗೀತೆ ಸಹಿತ ಘೋಷಣೆ ಕೂಗುತ್ತಾ ಮೆರವಣಿಗೆ ಮಂಗಳೂರಿಗೆ ಸಾಗಿತು.

LEAVE A REPLY

Please enter your comment!
Please enter your name here