ಬಂಟ್ವಾಳ : ಬಂಟರ ಸಂಘ ಬಂಟವಾಳ ತಾಲೂಕು (ರಿ) ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಸೆ. 4ರಂದು ಬೆಳಗ್ಗೆ 10.30 ಕ್ಕೆ ಬಂಟವಾಳದ ಬಂಟರ ಭವನ ವಳವೂರು ತುಂಬೆ ಇದರ ಪಿ.ವಿ. ಶೆಟ್ಟಿ ಆಡಿಟೋರಿಯಂನಲ್ಲಿ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಸಮಾರಂಭ ಉದ್ಘಾಟಿಸುವರು. ಬಂಟರ ಸಂಘ ಬಂಟವಾಳ ನಿಕಟಪೂರ್ವ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ , ಸಿ.ಎಸ್.ಆರ್. ಆಲ್ ಕಾರ್ಗೊ ಲಾಜಿಸ್ಟಿಕ್ ಲಿ. ಪ್ರಧಾನ ವ್ಯವಸ್ಥಾಪಕ ಡಾ| ನೀಲ್‌ರತನ್ ಶೆಂಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಮುಂಬೈ ಹೇರಂಭ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರನ್ನು ಇದೇ ಸಂದರ್ಭ ಸಮ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ಸಹಾಯ ಧನ, ಪ್ರತಿಭಾನ್ವಿತ ವಿದ್ಯಾರ್ಥಿಗಳೆಗೆ ಪ್ರತಿಭಾ ಪುರಸ್ಕಾರ, ಸ್ಕಾಲರ್ ಶಿಪ್ ಬಂಟ ಸಮಾಜ ಮತ್ತು ಇತರ ಸಮಾಜ ವಿದ್ಯಾರ್ಥಿಗಳಿಗೆ 42ಲಕ್ಷ ರೂ. ವಿದ್ಯಾರ್ಥಿ ವೇತನ ನೀಡುವುದಾಗಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here