ಶಿಕ್ಷಕರ ದಿನಾಚರಣೆ 2022- ಗುರುವಂದನಾ ಸಮಾರಂಭ

0

ಬಂಟ್ವಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣ ಸಮಿತಿ ಇದರ ಆಶ್ರಯದಲ್ಲಿ ಆದರ್ಶ ಶಿಕ್ಷಕ, ಖ್ಯಾತ ಶಿಕ್ಷಣ ತಜ್ಞ, ಭಾರತದ ಮಾಜಿ ರಾಷ್ಟ್ರಪತಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ನೆನಪಿಗಾಗಿ ಶಿಕ್ಷಕರ ದಿನಾಚರಣೆ 2022-ಗುರುವಂದನಾ ಸಮಾರಂಭವು ಸೆ. 5ರಂದು ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ನ ಅನುಗ್ರಹ ಸಭಾಂಗಣದಲ್ಲಿ ಜರಗಿತು.

ಸಭೆಯಲ್ಲಿ ಶ್ರೀ ರಾಮಕೃಷ್ಣ ಡಿಗ್ರಿ ಕಾಲೇಜು ಪ್ರಾಂಶುಪಾಲ, ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಶ್ರೀ ರಾಮಕೃಷ್ಣ ಎಜ್ಯುಕೇಶನ್ ಇನ್‌ಸ್ಟಿಟ್ಯೂಶನ್ಸ್ ನ ಆಡಳಿತಾಧಿಕಾರಿ ಫ್ರೋ| ಎಂ.ಬಾಲಕೃಷ್ಣ ಶೆಟ್ಟಿ, ಯವರು ಪ್ರಧಾನ ಉಪನ್ಯಾಸವನ್ನು ನೀಡಿದರು. ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಶಾಸಕ ವಿಧಾನ ಪರಿಷತ್ ಎಸ್.ಎಲ್ ಭೋಜೆ ಗೌಡ, ಬಂಟ್ವಾಳ ಪುರಸಭಾ ಸದಸ್ಯ ಮಹಮ್ಮದ್ ಶರೀಫ್, ಬಂಟ್ವಾಳ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ತಹಶೀಲ್ದಾರರು ಡಾ| ಸ್ಮಿತಾ ರಾಮ ಕೆ.ಎ.ಎಸ್., ಪ್ರಾಥಮಿಕ ಶಿಕ್ಷಕ ಸಂಘದ ಅಧ್ಯಕ್ಷ ಜಯರಾಮ, ಮುಖ್ಯೋಪಾ‍ಧ್ಯಾಯ ಸಂಘದ ಅ`ಕ್ಷ ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here