ಸೆ. 18: ಸಜೀಪಮುನ್ನೂರು ಮೂರ್ತಿದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಬಂಟ್ವಾಳ: ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜೀಪಮುನ್ನೂರು ಮೂರ್ತಿದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ. 18ರಂದು ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ಸಜೀಪ ಮೂಡ ಸುಭಾಷ್ ನಗರದ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಮಹಾಸಭೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. 10ನೇ ತರಗತಿ ಹಾಗೂ ಅದಕ್ಕಿಂತ ಮೇಲ್ಪಟ್ಟು ಹಾಗೂ ಉನ್ನತ ಶಿಕ್ಷಣ ಪಡೆಯುತ್ತಿರುವ ಶೇಕಡ 75 ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಿದ್ದು ವಿದ್ಯಾರ್ಥಿಗಳು ಅರ್ಜಿಗಳನ್ನು ಕೇಂದ್ರ ಕಚೇರಿ ಅಥವಾ ಶಾಖಾ ಕಚೇರಿಗಳಿಂದ ಪಡೆದು ಸೆಪ್ಟೆಂಬರ್ 15ರ ಒಳಗಾಗಿ ಅರ್ಜಿಗಳನ್ನು ತಲುಪಿಸುವಂತೆ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here