ಮಾರ್ನಬೈಲು ಬಝಾರ್ ಗ್ರೂಪ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಡಾ| ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ ನಿಧನ

0

ಬಂಟ್ವಾಳ : ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಬಝಾರ್ ಗ್ರೂಫ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಡಾ| ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ (54 ವ) ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಸೆ. 23ರಂದು ನಿಧನ ಹೊಂದಿದರು.

ಮೃತರು ಪತ್ನಿ, ಪುತ್ರ , ಹಿರಿಯ ಸಹೋದರಿ, ಕಿರಿಯ ಸಹೋದರ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡವರು. ಫ್ರೆಂಡ್ಸ್ ಆಫ್ ಇಂಡಿಯಾ ಪ್ರಶಸ್ತಿ ಪುರಸ್ಕೃತರು, ಪಾಣೆಮಂಗಳೂರು ಮಾರ್ನಬೈಲು ಮಂಗಳೂರು ಬಝಾರ್ ಬೀಡಿಗಳು ಮತ್ತು ಬಜಾರ್ ಐಸ್‌ಕ್ರೀಮ್ ಸಂಸ್ಥೆಯ ಆಡಳಿತ ಪಾಲುದಾರರು, ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡವರು. ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ ಮತ್ತು ಮಂಗಳೂರು ಶ್ರೀ ಕಾಳಿಕಾಂಬ ದೇವಸ್ಥಾನದ ಮೊಕ್ತೇಸರರಾಗಿ ಕ್ಷೇತ್ರದ ಪ್ರಗತಿಯ ರೂವಾರಿಯಾಗಿದ್ದರು. ಸಜೀಪ ಮಾಗಣೆ ನಾಲ್ಕ್ತ್ರೆತ್ತಾಯ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮಾರ್ನಬೈಲು ಶ್ರೀ ಅಯ್ಯಪ್ಪ ಮಂದಿರ ನಿರ್ಮಾಣ ಸಮಿತಿ ಉಪಾಧ್ಯಕ್ಷರಾಗಿ, ಬಂಟ್ವಾಳ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಸಕ್ರಿಯ ಸದಸ್ಯರು ಸಜೀಪಮುನ್ನೂರು ಮಾರ್ನಬೈಲು ಆರೋಗ್ಯ ಉಪ ಕೇಂದ್ರದ ಅಭಿವದ್ದಿಯ ರೂವಾರಿ.ಅವರು ಇಂತಹ ಹಲವಾರು ಸಾಮಾಜಿಕ ಸೇವೆಗಳಲ್ಲಿ ಗುರುತಿಸಿಕೊಂಡವರು.

LEAVE A REPLY

Please enter your comment!
Please enter your name here