ಶಾಸಕ ಹರೀಶ್ ಪೂಂಜರ ಕಾರನ್ನು ಅಡ್ಡಗಟ್ಟಿ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳು

0

ಬೆಳ್ತಂಗಡಿ: ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ತಲವಾರು ತೋರಿಸಿ  ಜೀವಬೆದರಿಕೆ ಒಡ್ಡಿದ್ದ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿ ಪೇಟೆ-ಪಡೀಲ್ ಎಂಬಲ್ಲಿ ಅ.13ರಂದು ತಡ ರಾತ್ರಿ ನಡೆದಿದೆ.

ಈ ಬಗ್ಗೆ ಹರೀಶ್ ಪೂಂಜರವರ ಕಾರು ಚಾಲಕ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.13ರಂದು ಸಂಜೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಹರೀಶ್ ಪೂಂಜರವರು ಕಾರಿನಲ್ಲಿ ಬೆಳ್ತಂಗಡಿಗೆ ಬರುವ ವೇಳೆ ಈ ಘಟನೆ ನಡೆದಿದೆ.

ಬಿಳಿ ಸ್ಕಾರ್ಪಿಯೋ ಕಾರಿನಲ್ಲಿ ಶಾಸಕರ ಕಾರನ್ನು ಕಿಡಿಗೇಡಿಗಳು ಹಿಂಬಾಲಿಸಿದ್ದಾರೆ. ಶಾಸಕರಿದ್ದ ಕಾರು ಫರಂಗಿ ಪೇಟೆಯ ಮೀನು ಮಾರುಕಟ್ಟೆ ಬಳಿ ತಲುಪುತ್ತಲೇ ದುಷ್ಕರ್ಮಿಗಳು ತನ್ನ ಕಾರನ್ನು ಅಡ್ಡಕ್ಕೆ ನಿಲ್ಲಿಸಿ ಕಾರಿನಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ಬೈದು ತನ್ನ ಕೈಯಲ್ಲಿದ್ದ ತಲವಾರನ್ನು ತೋರಿಸಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

LEAVE A REPLY

Please enter your comment!
Please enter your name here