ಬೊಳಂತೂರು ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣಾ ಕಾರ್ಯಕ್ರಮ

0

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಮತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಿಸುವ ಕಾರ್ಯಗಾರವನ್ನು ಅ.27ರಂದು ಆಯೊಜಿಸಲಾಗಿತ್ತು. ಈ ತರಭೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ ಸಂಧ್ಯಾˌ ಉಪಾಧ್ಯಕ್ಷೆ ಮಹಾಲಕ್ಶ್ಮಿ,ˌ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾ ˌಪಂಚಾಯತ್ ಸದಸ್ಯರು, ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆಯರುˌ ಗ್ರಾಮಸ್ಥರು ,ಎನ್.ಆರ್.ಲ್.ಮ್. ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ನ ಸಮುದಾಯ ಸಂಘಟಕಿ ಗುಣವತಿಯವರು ಮಳೆ ನೀರು ಕೊಯ್ಲು ಮತ್ತು ವಿಲ್ಮಾ ರವರು ಬೂದು ನೀರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ತಾಲೂಕಿನ ಎಂ ಜಿ.ಎನ್.ಆರ್ ಇ .ಜಿ.ಎ ಯ IEC ಸಿಬ್ಬಂದಿ ರಾಜೇಶ್ ರವರು ಜಲ ಮರುಪೂರಣ ಘಟಕ ಮತ್ತು ದ್ರವತ್ಯಾಜ್ಯ ಘಟಕ ವೆಚ್ಚದ ಬಗ್ಗೆ ಮಾಹಿತಿ ನೀಡಿದರು. ಅನುಷ್ಟಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ವಿಲ್ಮಾರವರು ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here