ಒಕ್ಕೂಟ ವಿಪತ್ತು ನಿರ್ವಹಣಾ ಶೌರ್ಯ ತಂಡದಿಂದ ಶಾಲಾ ಕೊಠಡಿಗಳ ಸ್ವಚ್ಛತಾ ಕಾರ್ಯಕ್ರಮ

0

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ವಿಪತ್ತು ನಿರ್ವಹಣಾ ಶೌರ್ಯ ತಂಡದಿಂದ ವಿರಕಂಬ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಮಜಿ ವಿರಕಂಬ ಇಲ್ಲಿ ಸ್ಕೂಲ್ ಬೆಲ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್,ಹಾಗೂ ವಿಟ್ಲ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮಕ್ಕಳು ಶಾಲಾ ಕೊಠಡಿಗಳನ್ನು ಅಲಂಕಾರ ಮಾಡುವಾಗ ಕೊಠಡಿಗಳ ನೆಲದ ಹಾಗೂ ಜಗಲಿಗಳ ಮೇಲೆ ಆದ ಬಣ್ಣದ ಕಲೆಗಳ ಸ್ವಚ್ಛತೆ ಮಾಡಿ ಉತ್ತಮ ರೀತಿಯಲ್ಲಿ ತರಗತಿ ನಡೆಸಲು ವ್ಯವಸ್ಥೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ವಿರಕಂಬ ಶ್ರೀ ಶಾರದಾ ಭಜನಾ ಮಂದಿರದ ಭಜನಾ ಮಂಡಳಿಯ ಸದಸ್ಯರು ಹಾಗೂ ಶಾಲಾ ಹಿರಿಯ ವಿದ್ಯಾರ್ಥಿಗಳು ಅವರೊಂದಿಗೆ ಸೇರಿಕೊಂಡು ಸ್ವಚ್ಛತಾ ಕಾರ್ಯದಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here