ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಕಾಣಿಕೆ ಹುಂಡಿ ಕಳವು

0


ವಿಟ್ಲ: ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಒಡೆದು ಕಳ್ಳರು ಹಣ ಎಗರಿಸಿದ ಘಟನೆ ನ.8ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಜಿಲ್ಲೆಯ ಪ್ರಸಿದ್ಧ ಕ್ಷೇತ್ರಗಳ ಪೈಕಿ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರವೂ ಒಂದು. ಕ್ಷೇತ್ರದ ಪಕ್ಕದ ಹೆದ್ದಾರಿ ಬದಿಯಲ್ಲಿ ಕ್ಷೇತ್ರದ ಕಾಣಿಕೆ ಹುಂಡಿಯನ್ನು ಇಡಲಾಗಿತ್ತು. ಈ ರಸ್ತೆಯಲ್ಲಿ ತೆರಳುವ ಹಲವಾರು ವಾಹನ ಸವಾರರು ಪ್ರತಿನಿತ್ಯ ಕಾಣಿಕೆ ಹಾಕಿ ತೆರಳುತ್ತಿದ್ದರು. ನ.8ರಂದು ತಡರಾತ್ರಿ ಯಾರೋ ಕಿಡಿಗೇಡಿಗಳು ಈ ಕಾಣಿಕೆ ಹುಂಡಿಯನ್ನು ಒಡೆದು ಹಣವನ್ನು ಕಳವುಗೈದಿದ್ದಾರೆ. ಕಾಣಿಕೆ ಹುಂಡಿಯನ್ನು ಒಡೆದಿರುವುದನ್ನು ಕಂಡ ಸ್ಥಳೀಯರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here