ಗೋಳ್ತಮಜಲು ಗ್ರಾ.ಪಂ. ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿದ ರಾಜೇಶ್‌ ಅವರಿಗೆ ಅಭಿನಂದನಾ ಕಾರ್ಯಕ್ರಮ

0

ಬಂಟ್ವಾಳ: ಗೋಳ್ತಮಜಲು ಗ್ರಾಮ ಪಂಚಾಯತ್‌ನಲ್ಲಿ ಈ ಮೊದಲು ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿ ಪ್ರಸ್ತುತ ಗ್ರಾಮ ಪಂಚಾಯತಿಯ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿದ ರಾಜೇಶ್ ಅವರಿಗೆ ಅಭಿನಂದನ ಕಾರ್ಯಕ್ರಮವು ಗ್ರಾ.ಪಂ. ಅಧ್ಯಕ್ಷ ಅಭಿಷೇಕ್ ಎನ್. ಅವರ ಅಧ್ಯಕ್ಷತೆಯಲ್ಲಿ ನ. 22 ರಂದು ಕಲ್ಲಡ್ಕ ನೇತಾತಿ ಸ್ಪೃತಿ ಭವನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಗೋಳ್ತಮಜಲು ಗ್ರಾ.ಪಂಚಾಯತ್‌ನಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ಸೇವೆ ಸಲ್ಲಿಸಿದ್ದ ನವೀನ್ ರಾಬರ್ಟ್ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಸಂಜೀವ ನಾಯ್ಕ ಇವರು ಪ್ರಸ್ತುತ ಬೇರೆ ಗ್ರಾ.ಪಂಚಾಯತ್‌ಗಳಿಗೆ ವರ್ಗಾವಣೆಗೊಂಡಿದ್ದು ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಪ್ರಸ್ತುತ ಗೋಳ್ತಮಜಲು ಗ್ರಾ.ಪಂ. ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ವರ್ಗಾವಣೆಗೊಂಡ ಚಿತ್ರ ಇವರನ್ನು ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಗ್ರಾ.ಪಂ. ಉಪಾಧ್ಯಕ್ಷೆ ಲಕ್ಷ್ಮೀ ವಿ. ಪ್ರಭು, ಪಂಚಾಯತ್ ಅಭಿವೃದ್ದಿ ಅಧಿಕಾರಿ ವಿಜಯ ಶಂಕರ ಆಳ್ವ ಎಂ. ಹಾಗೂ ಸದಸ್ಯರು, ಗ್ರಾ.ಪಂ.ಮಾಜಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ. ಪಂಪ್ ಚಾಲಕರು, ಗ್ರಾ.ಪಂ. ಸಿಬ್ಬಂದಿ ವರ್ಗ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾ.ಪಂಚಾಯತ್ ಸದಸ್ಯ ರಾಜೇಶ್ ಕೊಟ್ಟಾರಿ ಕಾರ್ಯಕ್ರಮನ್ನು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here