ಅಳಿಕೆ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

0

ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಡಿ.೮ರ ತಡರಾತ್ರಿ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರಂಬು ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಎರುಂಬು ನಿವಾಸಿ ಜನಾರ್ದನ ಆಚಾರ್ಯ(55 ವ.) ಮೃತಪಟ್ಟವರು. ನನ್ನ ಪತಿ ಜನಾರ್ದನ ಆಚಾರ್ಯರವರು ಎರಡು ವರ್ಷದಿಂದ ಗಂಟಲು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಂಗಳೂರು ಎ.ಜೆ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದುಕೊಂಡಿದ್ದು ನಂತರ ಆಯುರ್ವೇದಿಕ್ ಔಷದಿ ಮಾಡಿಕೊಂಡಿದ್ದರು.

ಡಿ.8ರಂದು ಸಾಯಂಕಾಲ ಮನೆಯಿಂದ ಹೊರಹೋದವರು ರಾತ್ರಿಯಾದರೂ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಅವರಿಗಾಗಿ ವಿವಿಧೆಡೆ ಹುಡುಕಾಟ ನಡೆಸಿದ ವೇಳೆ ಅವರು ಮನೆ ಪಕ್ಕದ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಮೃತರ ಪತ್ನಿ ವಿಮಾಲರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here