ವಿ.ಬಿ. ಅರ್ತಿಕಜೆಯವರಿಗೆ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ

0

ಬಂಟ್ವಾಳ: ಹಿರಿಯ ವಿದ್ವಾಂಸ, ವಿಶ್ರಾಂತ ಉಪನ್ಯಾಸಕ, ಪತ್ರಕರ್ತ ಪ್ರೊ.ವಿ.ಬಿ. ಅರ್ತಿಕಜೆ ಅವರಿಗೆ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿಯನ್ನು ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಭಾನುವಾರ ಸಂಜೆ ಪ್ರದಾನ ಮಾಡಲಾಯಿತು.


ಪಾಣೆಮಂಗಳೂರು ನೀರ್ಪಾಜೆ ಭೀಮ ಭಟ್ಟರ ಅಭಿಮಾನಿ ಬಳಗದ ವತಿಯಿಂದ ನಡೆದ ಸಮಾರಂಭವನ್ನು ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಸೇಸಪ್ಪ ಕೋಟ್ಯಾನ್ ಉದ್ಘಾಟಿಸಿ ಶುಭಹಾರೈಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು.


ಹಿರಿಯ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಅಭಿನಂದನಾ ಭಾಷಣ ಮಾಡಿದರು. ವಿಟ್ಲದ ಉದ್ಯಮಿ ಸುದರ್ಶನ ಪಡಿಯಾರ್ ಅವರು ಭೀಮ ಭಟ್ ಸಂಸ್ಕರಣೆ ಮಾಡಿದರು.ದ.ಕ.ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರದೀಪಕುಮಾರ್ ಕಲ್ಕೂರ, ಬಂಟ್ವಾಳ ತಾ.ಪಂ.ಮಾಜಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಅಭಿಮಾನಿ ಬಳಗದ ಸಂಚಾಲಕ ಕೊಯಿಲ ಮೋಹನ್ ರಾವ್ ಉಪಸ್ಥಿತರಿದ್ದರು. ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ್ ಜೈನ್ ಸ್ವಾಗತಿಸಿದರು. ಉಪಾಧ್ಯಕ್ಷ ಶಿವಶಂಕರ ಎಸ್. ವಂದಿಸಿದರು. ನಿವೃತ್ತ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here