ಡಿ.17: ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ :ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಭೇಟಿ ನಿರೀಕ್ಷೆ

0

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಎಲಿಯನಡುಗೋಡು ಗ್ರಾಮ ಮತ್ತು ಬೆಳ್ತಂಗಡಿ ತಾಲ್ಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಕಳೆದ 40 ಕ್ಕೂ ಮಿಕ್ಕಿ ವರ್ಷಗಳಿಂದ ನಡೆಯುತ್ತಿರುವ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಡಿ. 17 ರಂದು ನಡೆಯಲಿದೆ.


ಬೆಳಿಗ್ಗೆ ಪೂಂಜ ಕ್ಷೇತ್ರದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಕಂಬಳಕ್ಕೆ ಚಾಲನೆ ನೀಡಲಿದ್ದು, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ಮಧ್ಯಾಹ್ನ 11 ಗಂಟೆಗೆ ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ ಸಿಂಗ್ ಭಾಗವಹಿಸಲಿದ್ದು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆಯಲ್ಲಿ ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಸಭಾ ಕಾರ್ಯಕ್ರಮ ಉದ್ಘಾಟಿಸುವರು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here