ನಾವೂರು (ಜ.10) : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಸಾಧನಾ ಸಮಾವೇಶ

0

ಬಂಟ್ವಾಳ:ಬಂಟ್ವಾಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿ.ಸಿ.ಟ್ರಸ್ಟ್ ಪ್ರಗತಿ ಬಂಧು -ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇದರ ಸಹಯೋಗದೊಂದಿಗೆ ಪದ್ಮವಿಭೂಷಣ ಡಾ| ಡಿ. ವಿರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ಅವರ ಕೃಪಾಶೀರ್ವಾದದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಸಾಧನಾ ಸಮಾವೇಶ ಜ. 10 ರಂದು ಬೆಳಗ್ಗೆ 10.30ಕ್ಕೆ ನಾವೂರೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಅಗ್ರಾರ್ ಬೀದಿ ನಾವೂರಿನಲ್ಲಿ ಜರಗಲಿದೆ.


ಕಾರ್ಯಕ್ರಮ ಬೆಳಗ್ಗೆ 8.30ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ, ಬೆಳಗ್ಗೆ 10 ರಿಂದ ಮಹಾಪೂಜೆ,10.30 ರಿಂದ ಸಾಧನಾ ಸಮಾವೇಶ, ಮಧ್ಯಾಹ್ನ 12.30ರಿಂದ ತೀರ್ಥ ಪ್ರಸಾದ, ಅನ್ನಸಂತರ್ಪಣೆ ಜರಗಲಿದೆ.


ಸಭಾ ಕಾರ್ಯಕ್ರಮವನ್ನು ಶ್ರೀ.ಕ್ಷೇ. ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್, ಧರ್ಮಸ್ಥಳ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಲ್.ಎಚ್. ಮಂಜುನಾಥ್ ಉದ್ಘಾಟಿಸಲಿದ್ದು, ಬಂಟ್ವಾಳ ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ವಿಧಾನ ಸಭಾಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ, ಬಂಟ್ವಾಳ ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿ’ಸೋಜಾ, ನಾವೂರು ಗ್ರಾ.ಪಂ. ಅಧ್ಯಕ್ಷ ಉಮೇಶ್ ಕುಲಾಲ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಭಾರತಿ ಭಾಗವಹಿಸಲಿದ್ದಾರೆ.‌


ಬಂಟ್ವಾಳ ವಲಯ ಜನಜಾಗೃತಿ ವೇದಿಕೆಯ ಮನ್ಮಥರಾಜ್ ಜೈನ್, ನಾವೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುರಳೀಧರ್ ಭಟ್, ಬಂಟ್ವಾಳ ಶ್ರೀ. ಕ್ಷೇ.ಧ.ಗ್ರಾ.ಯೋಜನೆಯ ವಲಯಾಧ್ಯಕ್ಷ ಮನೋಹರ ಕುಲಾಲ್, ಗೌರವ ಉಪಸ್ಥಿತರಿರುವರು.


ಜಯಾನಂದ ಪಿ. ಯೋಜನಾಧಿಕಾರಿ ಬಂಟ್ವಾಳ ತಾಲೂಕು, ಕೇಶವ ಮೇಲ್ವಿಚಾರಕರು ಸೇವಾಪ್ರತಿನಿಧಿ ಬಂಟ್ವಾಳ ವಲಯ, ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here