ವೀರಕಂಬ ಉಮಾಮಹೇಶ್ವರ ದೇವಸ್ಥಾನದ ಪರಿಸರ ಈಗ ಸ್ವಚ್ಚ- ಸುಂದರ

0

ವೀರಕಂಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಇದರ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ವೀರಕಂಬ ಗ್ರಾಮದ ಮಜಿ ಶಾಲಾ ಬಳಿಯ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ವಠಾರ ಸ್ವಚ್ಛತಾ ಕಾರ್ಯಕ್ರಮ ಜರಗಿತು. ಪರಿಸರವನ್ನು ಸ್ವಚ್ಚ ಮಾಡುವ ಮೂಲಕ ದೇವಸ್ಥಾನಕ್ಕೆ ಹೊಸ ಮೆರುಗು ತಂದಿದೆ.


ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮುಕ್ತೇಸರ ತಿರುಮಲ ಕುಮಾರ್ ಮಜಿ, ಕಲ್ಲಡ್ಕ ವಲಯ ಜನಜಾಗ್ರತಿ ವೇದಿಕೆ ಸದಸ್ಯ ವೀರಪ್ಪ ಮೂಲ್ಯ, ವೀರಕಂಬ ಗ್ರಾಮ ಪಂಚಾಯತ್ ಸದಸ್ಯೆ ಮೀನಾಕ್ಷಿ ಸುನಿಲ್, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ, ವಿರಕಂಬ ಒಕ್ಕೂಟದ ಉಪಾಧ್ಯಕ್ಷ ಹರೀಶ್ ಬಂಗೇರ, ಸೇವಾ ಪ್ರತಿನಿಧಿ ರೇವತಿ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವ- ಸಹಾಯ ಗುಂಪುಗಳ ಸದಸ್ಯರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here