ಬಂಟ್ವಾಳ : ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರಕ್ಕೆ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮಿಜಿ ಭೇಟಿ

0

ಬಂಟ್ವಾಳ : ಸ್ವರ್ಣಾ ವರ್ಷಾಚರಣೆ ಸಂಭ್ರಮದಲ್ಲಿರುವ ಬಂಟ್ವಾಳ ಬೈಪಾಸ್ ನಿತ್ಯಾನಂದ ನಗರ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರಕ್ಕೆ ಜ. 24 ರಂದು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮಿಜಿ ಭೇಟಿ ನೀಡಿದರು.

ಇದೇ ಸಂದರ್ಭ ನಡೆದ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದರು. ಜಿ.ಪಂ. ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ, ಆಡಳಿತ ಸಮಿತಿ ಅಧ್ಯಕ್ಷ ಬಿ.ದಿನೇಶ ಭಂಡಾರಿ, ಗೌರವ ಅಧ್ಯಕ್ಷ ಸುರೇಶ್ ಕುಲಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ. ಹರೀಶ್ ಶೆಟ್ಟಿ, ಪ್ರ.ಕಾರ್ಯದರ್ಶಿ ಚೆನ್ನಕೇಶವ ಡಿ.ಆರ್. ಮತ್ತು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here