ಕೊಡುಗೈ ದಾನಿ ಕೆ.ಸೇಸಪ್ಪ ಕೋಟ್ಯಾನ್ ನಿಧನ

0

ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.


ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಆರೋಗ್ಯದಲ್ಲಿ ಏರುಪೇರಾಗಿದ್ದು ಅಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ
ಚಿಕಿತ್ಸೆಗೆ ಸ್ಪಂದಿಸಿದೆ ಜ.26ರಂದು ಸಂಜೆ ಅವರು ಇಹಲೋಕ ತ್ಯಜಿಸಿದ್ದಾರೆ.

ಮೃತದೇಹವನ್ನು ಪಚ್ಚಿನಡ್ಕ ನಿವಾಸಕ್ಕೆತರಲಾಗಿದ್ದು (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.

ಬಂಟ್ವಾಳದಲ್ಲಿ ಯಶಸ್ವಿ ಉದ್ಯಮಿ ಎಂಬ ಹೆಗ್ಗಳಿಕೆ ಗೆ ಪಾತ್ರವಾಗಿದ್ದ ಇವರು ಶುಭ ಬೀಡಿ, ಶುಭ ಟ್ರಾವೆಲ್ಸ್ , ಶುಭಲಕ್ಮೀ ಮದುವೆ ಹಾಲ್, ಸಹಿತ ಅನೇಕ ಉದ್ಯಮ ನಡೆಸುತ್ತಿದ್ದು, ಅನೇಕ ಕುಟುಂಬಗಳಿಗೆ ಉದ್ಯೋಗ ನೀಡಿದ ಅನ್ನದಾತರಾಗಿದ್ದರು.

LEAVE A REPLY

Please enter your comment!
Please enter your name here