ಬಂಟ್ವಾಳ ಪ. ಜಾತಿ ಪಂಗಡ ಕುಂದುಕೊರತೆಗಳ ಮಾಹಿತಿ ಸಭೆ

0


ಬಂಟ್ವಾಳ: ಪ. ಜಾತಿ ಪಂಗಡ ಕುಂದುಕೊರತೆಗಳ ಮಾಹಿತಿ ಸಭೆಯು ಜು. 25ರಂದು ಬಂಟ್ವಾಳ ನಗರ ಠಾಣೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಹೃಷಿಕೇಶ್ ಸೋನಾವಣೆ ಮಾರ್ಗದರ್ಶನದಲ್ಲಿ ನಡೆಯಿತು.

ಬಂಟ್ವಾಳ ನಗರ ಪೊಲೀಸ್ ಠಾಣೆ, ಗ್ರಾಮಾಂತರ ಠಾಣೆ, ಸಂಚಾರ ಠಾಣೆಗಳ ವ್ಯಾಪ್ತಿಯ ಸಮಸ್ಯೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕ ಪ್ರತಾಪ್ ಸಿಂಗ್ ಥೋರಾಟ್, ಬಂಟ್ವಾಳ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ. ಅವಿನಾಶ್, ಗ್ರಾಮಾಂತರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್., ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಎಸ್.ಐ. ಮೂರ್ತಿ, ನಗರ ಠಾಣಾ ಅಪರಾಧ ವಿಭಾಗದ ಎಸ್.ಐ.ಕಲೈಮಾರ್ ಉಪಸ್ಥಿತರಿದ್ದು ಕುಂದುಕೊರತೆಗಳ ವಿವರಣೆ, ಕಾನೂನು ಬಗ್ಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here