ಏಮಾಜೆ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

0

ಬಂಟ್ವಾಳ: ಶಾಸಕನಾಗಿ ಇರಲಿ ಅಥವಾ ಇಲ್ಲದಿರಲಿ ಒಳ್ಳೆಯ ಕೆಲಸಗಳ ಜೊತೆ ಯಾವಾಗಲೂ ನಾನಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.

ಅವರು ಬಂಟ್ವಾಳ ತಾಲೂಕು ನೆಟ್ಲ ಮುಡ್ನರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 14ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲಿಕಾ ಕೊಠಡಿಗೆ ಶಿಲನ್ಯಾಸ , ಮುತ್ತೊಟ್ಟು ಫೈನಾನ್ಸ್ ವತಿಯಿಂದ ನಿರ್ಮಿಸಲ್ಪಟ್ಟ ಬಾಲವನ, ಹಾಗೂ ನೆಟ್ಲ ಮುಡ್ನರು ಗ್ರಾಮ ಪಂಚಾಯತ್ ವತಿಯಿಂದ ನರೇಗಾ ಯೋಜನೆಯ ಅಡಿಯಲ್ಲಿ ನಿರ್ಮಿಸಲ್ಪಟ್ಟ ಶಾಲಾ ಆವರಣ ಗೋಡೆ ಹಾಗೂ ಆಟದ ಮೈದಾನ ವಿಸ್ತರಣಾ, ಹರೀಶ್ ಮುಜಾಲ ಒದಗಿಸಿಕೊಟ್ಟ ಬಾಸ್ಕೆಟ್ ಬಾಲ್ ಕ್ರೀಡಾ ಸಲಕರಣೆ ಮೊದಲಾದ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಟ್ಲ ಮುಟ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ವಹಿಸಿದ್ದರು, ಈ ಸಂದರ್ಭದಲ್ಲಿ ಶಾಲೆಗೆ ಸಹಕರಿಸಿದ ವಿವಿಧ ಗಣ್ಯರನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಪಂಚಾಯತ್ ಸದಸ್ಯರಾದ ಸವಿತಾ ಡಿ ಪೂಜಾರಿ, ಧನಂಜಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಲ್ಲಿಕಾ ಗಣೇಶ್ ಆಚಾರ್ಯ, ಉಪಾಧ್ಯಕ್ಷ ಪ್ರಸಾದ್ ಆಚಾರ್ಯ ಮೈಕೆ, ಮುತ್ತೂಟ್ ಫೈನಾನ್ಸಿನ ಪುತ್ತೂರು ಕ್ಲಸ್ಟರ್ ಮೆನೇಜರ್ ಸಂದೇಶ್ ಶೇನೈ, ಪುತ್ತೂರು ಬ್ರಾಂಚ್ ಮ್ಯಾನೇಜರ್ ನವೀನ್ ಎ,ಮಂಗಳೂರು ಸಿ ಎಸ್ ಆರ್ ಮೆನೇಜರ್ ಪ್ರಸಾದ್ ಕುಮಾರ್ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿ, ಗೌರವ ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು ಶಾಲಾ ಶಿಕ್ಷಕಿಯರು ಸಹಕರಿಸಿದರು.

LEAVE A REPLY

Please enter your comment!
Please enter your name here