ಬಿಬಿಸಿ ಸುದ್ದಿ ಸಂಸ್ಥೆ ಮೇಲೆ ಐಟಿ ದಾಳಿ KUWJ ಖಂಡನೆ

0

ಬೆಂಗಳೂರು : ಬಿಬಿಸಿ ಸುದ್ದಿ ಸಂಸ್ಥೆಯ ಮೇಲೆ ಐಟಿ ಇಲಾಖೆ ದಾಳಿ ನಡೆಸಿರುವುದನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ KUWJ ಖಂಡಿಸಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಕರೆಯುವ ಮಾಧ್ಯಮ ಬಲಿಷ್ಠವಾಗಿದ್ದರೆ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿರಲು ಸಾಧ್ಯ. ಆದರೆ ಮಾಧ್ಯಮವನ್ನು ಹೆದರಿಸಿ, ಭಯದಲ್ಲಿರಿಸುವ ಪ್ರಯತ್ನ ಖಂಡನೀಯ ಎಂದು KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here