ಮಾ.4: ನಾವೂರು ಕೂಡಿಬೈಲಿನಲ್ಲಿ ಮೂಡೂರು-ಪಡೂರು ಕಂಬಳ

0

ಬಂಟ್ವಾಳ :ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಸಮೀಪದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಮಾ 4 ರಂದು ನಡೆಯುವ ಮೂಡೂರು-ಪಡೂರು ಕಂಬಳ ಪ್ರಯುಕ್ತ ಕರೆ ಪೂಜೆ, ಗಣಹೋಮ ಹಾಗೂ ಕಂಬಳ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ಮಾ.3ರಂದು ಕಂಬಳ ಗದ್ದೆಯಲ್ಲಿ ನಡೆಯಿತು.

ಈ ಸಂದರ್ಭ ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್ ರೊಡ್ರಿಗಸ್, ಸಂಚಾಲಕ ಬಿ. ಪದ್ಮಶೇಖರ್ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಪಾಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ಕೋಶಾಧಿಕಾರಿ ಪಿಲಿಫ್ ಫ್ರಾಂಕ್, ಸದಸ್ಯರುಗಳಾದ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಸುವರ್ಣ ಜೈನ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here