ಪ್ರವೀಣ್ ನೆಟ್ಟಾರು ಮನೆಗೆ ಬಿ.ವೈ.ವಿಜಯೇಂದ್ರ, ಸಚಿವ ಅಂಗಾರ, ಶಾಸಕ ಕೆ.ಜಿ.ಬೋಪಯ್ಯ ಭೇಟಿ

0

ಪುತ್ತೂರು:ಜು.26ರಂದು ರಾತ್ರಿ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರ ಮನೆಗೆ ಜು.28ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ,ಪ್ರವೀಣ್‌ರವರ ಪತ್ನಿ ನೂತನ ಕುಮಾರಿ ಹಾಗೂ ಅವರ ಮನೆಯವರಿಗೆ ಸಾಂತ್ವನ ಹೇಳಿದರು.ಸರಕಾರದ ವತಿಯಿಂದ ಪರಿಹಾರವಾಗಿ ರೂ.25 ಲಕ್ಷವನ್ನು ಮೃತನ ಕುಟುಂಬಕ್ಕೆ ಮುಖ್ಯಮಂತ್ರಿ ವಿತರಿಸಿದರು.ಈ ವೇಳೆ ಪ್ರವೀಣ್ ಪತ್ನಿ ನೂತನ ಕುಮಾರಿಯವರು ಮುಖ್ಯಮಂತ್ರಿಯವರ ಜೊತೆ ಮಾತನಾಡುತ್ತಾ,ನನ್ನ ಗಂಡನನ್ನು ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು ಅಥವಾ ಅವರನ್ನು ಎನ್‌ಕೌಂಟರ್ ಮಾಡಿದರೆ ನನಗೆ ತೃಪ್ತಿ ಹಾಗೂ ನನ್ನ ಗಂಡನ ಆತ್ಮಕ್ಕೆ ಶಾಂತಿ ಎಂದು ಹೇಳಿದರು.ಮನೆಯೊಳಗೆ ಹೋದ ಮುಖ್ಯಮಂತ್ರಿ ಬೊಮ್ಮಾಯಿಯವರು ಮೃತ ಪ್ರವೀಣ್ ನೆಟ್ಟಾರು ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕೈ ಮುಗಿದರು.

ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಪೂಜಾರಿ ನೆಟ್ಟಾರು ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಎಸ್. ಅಂಗಾರ, ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಶಾಸಕರುಗಳಾದ ಬಂಟ್ವಾಳದ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಬೆಳ್ತಂಗಡಿಯ ಹರೀಶ್ ಪೂಂಜಾ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮೊದಲಾದವರು ಭೇಟಿ ನೀಡಿ ಮನೆಯವರನ್ನು ಸಂತೈಸಿದರು. ಪ್ರವೀಣರವರ ಪತ್ನಿ, ತಾಯಿ ಮತ್ತು ತಂದೆ ಹಾಗೂ ಕುಟುಂಬಿಕರ ನೋವನ್ನು ಆಲಿಸಿದ ನಾಯಕರುಗಳು ಪರಸ್ಪರ ಸಮಾಲೋಚಿಸಿ ಪ್ರವೀಣ್ ನೆಟ್ಟಾರು ಪತ್ನಿಗೆ ಸರಕಾರಿ ಉದ್ಯೋಗದ ಭರವಸೆ ನೀಡಿದರಲ್ಲದೆ, ಪ್ರವೀಣರ ಮನೆಯನ್ನು ಹೊಸದಾಗಿ ನಿರ್ಮಿಸಿ ಕೊಡುವುದಾಗಿ ಹೇಳಿದರು.

LEAVE A REPLY

Please enter your comment!
Please enter your name here