ಬಂಟ್ವಾಳ : ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮಾ.9ರಂದು ಬಂಧಿಸಿದ್ದಾರೆ. ಸಂಗಬೆಟ್ಟು ಗ್ರಾಮದ ಅಳಿಕೆ ನಿವಾಸಿ ಅನಿಲ್ ಪೂಜಾರಿ ಬಂಧಿತ ಆರೋಪಿ. ಸುಮಾರು 1 ವರ್ಷದಿಂದ ತಲೆಮರೆಸಿಕೊಂಡಿದ್ದ ಈತನನ್ನು ಕಾರ್ಯಾಚರಣೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಬೆಳ್ತಂಗಡಿಯ ನಡಾ ಎಂಬಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.