ತಲೆಮರೆಸಿಕೊಂಡಿದ್ದ ವ್ಯಕ್ತಿ-ಹಾಸನದಲ್ಲಿ ಬಂಧನ

0

ಬಂಟ್ವಾಳ : ಕಳೆದ ಮೂರು ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ಬಂಧಿಸಿದೆ. ಹಾಸನದ ಬಿಕ್ಕೋಡು ನಿವಾಸಿ ರಮೇಶ್‌ ಎಂಬಾತ ಕಳೆದ ಮೂರು ವರುಷಗಳಿಂದ ನ್ಯಾಯಲಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಾ.8ರಂದು ಈತನ ಕುರಿತು ಲಭಿಸಿದ ಖಚಿತ ಮಾಹಿತಿ ಆಧರಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಹಾಸನದಲ್ಲಿ ದಸ್ತಗಿರಿ ಮಾಡಿದ್ದಾರೆ. ನ್ಯಾಯಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here