ಕಾರಿಂಜ ದೇವಾಲಯದ ಸುತ್ತಮುತ್ತಲಿನ 2ಕಿ.ಮಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿದ ಸರಕಾರ

0

ಬಂಟ್ವಾಳ : ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎರಡು ಕಿ.ಮಿ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ ಎಲ್ಲಾ ರೀತಿಯ ಗಣಿಗಾರಿಕೆ ಮತ್ತು ಕ್ರಸರ್‌ ಚಟುವಟಿಕೆಗಳನ್ನು ನಿಷೇದಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಾರಿಂಜ ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವ ಮೂಲಕ ಪಾವಿತ್ರ್ಯವನ್ನು ಉಳಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ಶಾಸಕ ರಾಜೇಶ್‌ ನಾಯಕ್‌ ಉಳಿಪ್ಪಾಡಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌ ಗಣಿಗಾರಿಕೆ ನಿಷೇಧ ಪ್ರದೇಶವೆಂದು ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹೇರಿದ್ದರು. ಮುಖ್ಯಮಂತ್ರಿಗಳ ನಿರ್ದೇಶನದಂತೆ ದ.ಕ ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಮಂಗಳೂರು ಸಹಾಯಕ ಕಮೀಷನರ್‌ ಹಾಗು ಗಣಿ ಮತ್ತು ಭೂ ವಿಜ್ಙಾನ ಇಲಾಖೆಯ ಉಪನಿರ್ದೇಶಕರ ಮೂಲಕ ದೇವಸ್ಥಾನದ ಸುತ್ತಾಮುತ್ತ ಜಂಠಿ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರು. ಈ ವರದಿಯ ಆದಾರದಲ್ಲಿ ಜಿಲ್ಲಾಧಿಕಾರಿ ಕಾರಿಂಜ ದೇವಸ್ಥಾನದ ಸುತ್ತಮುತ್ತಲಿನ 2 ಕಿ.ಮಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಿಷೇದಿಸುವಂತೆ ಸರಕಾರಕ್ಕೆ ಪ್ರಸ್ತಾವಣೆ ಸಲ್ಲಿಸಿದ್ದರು.ಪ್ರಸ್ತಾವಣೆ ಆದಾರದಲ್ಲಿ ಮು.ಮಂತ್ರಿ ಸೂಚನೆಯಂತೆ ಕರ್ನಾಟಕ ಉಪಕನಿಜ ರಿಯಾಯಿತಿ ನಿಯಮಗಳು 1994ರ ನಿಯಮ 8(3) ರಲ್ಲಿನ ಅಧಿಕಾರ ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಗಣಿಗಾರಿಕೆ ಮತ್ತು ಕ್ರಸರ್‌ ಚಟುವಟಿಕೆ ನಿಷೇದಿಸಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here