ಕಾರು ಚಾಲನೆ ವೇಳೆ ಅಸ್ವಸ್ಥಗೊಂಡ ಚಾಲಕ-ಕಾರು ಡಿಕ್ಕಿ

0

ಬಂಟ್ವಾಳ :ಕಾರೊಂದು ಬಿ.ಮೂಡ ಗ್ರಾಮದ ಗೂಡಿನಬಳಿಯಲ್ಲಿ ರಸ್ತೆ ಬದಿಯ ಅಂಗಡಿಯ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಮಾ.17ರಂದು ನಡೆದಿದೆ.

ಬಿಸಿರೋಡಿನ ನ್ಯಾಯವಾದಿ, ನಂದಾವರ ನಿವಾಸಿ ಹಾತಿಂ ಅಹ್ಮದ್ ಕಾರು ಚಲಾಯಿಸುತ್ತಿದ್ದ ವೇಳೆ ಅಸ್ವಸ್ಥಗೊಂಡು ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ.

ಘಟನೆಯಿಂದ ತೀವ್ರ ಗಾಯಗೊಂಡ ನ್ಯಾಯವಾದಿ ಹಾತಿಂ ಅಹ್ಮದ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ತಾಜುದ್ದೀನ್ ಎಂಬವರಿಗೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here