ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ-ಬಂಟ್ವಾಳಕ್ಕೆ ರಮಾನಾಥ ರೈ, ಸುಳ್ಯಕ್ಕೆ ಕೃಷ್ಣಪ್ಪ ಜಿ, ಕಾಪುವಿಗೆ ವಿನಯ ಕುಮಾರ್‌ ಸೊರಕೆ

0

ಪುತೂರಿನ ಅಭ್ಯರ್ಥಿ ಹೆಸರು 2ನೇ ಪಟ್ಟಿಯಲ್ಲಿ ಸಾಧ್ಯತೆ !


ಬಂಟ್ವಾಳ: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಾ.25ರಂದು ಪ್ರಕಟಿಸಿದ್ದು, ಇದರಲ್ಲಿ ಪುತ್ತೂರಿನ ಅಭ್ಯರ್ಥಿಯ ಘೋಷಣೆ ಆಗಿಲ್ಲ.

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ, ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೆಪಿಸಿಸಿ ಸಂಯೋಜಕರಾಗಿರುವ ಕೃಷ್ಣಪ್ಪ ಜಿ, ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪುತ್ತೂರಿನ ಮಾಜಿ ಶಾಸಕ,ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಅವರನ್ನು ಆಯ್ಕೆ ಮಾಡಲಾಗಿದೆ. ಪುತ್ತೂರಿನ ಅಭ್ಯರ್ಥಿಯ ಆಯ್ಕೆ ಇನ್ನೂ ಅಂತಿಮಗೊಳ್ಳದೇ ಇರುವುದರಿಂದ ಎರಡನೆ ಪಟ್ಟಿಯಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here