ರಾಷ್ಟ್ರಪತಿ ಜತೆ ಸಂವಾದ- ಬಂಟ್ವಾಳ ತಾಲೂಕಿನ ಮೂವರು ಮಹಿಳೆಯರು ಆಯ್ಕೆ

0

ಬಂಟ್ವಾಳ: ಮಾ.31ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸ್ವ-ಸಹಾಯ ಗುಂಪಿನ ಸದಸ್ಯರೊಂದಿಗಿನ ರಾಷ್ಟ್ರಪತಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಟ್ಲದ ಮೂವರು ಮಹಿಳೆಯರು ಆಯ್ಕೆಯಾಗಿದ್ದಾರೆ.

ಅಳಿಕೆ ಅನುಗ್ರಹ ಒಕ್ಕೂಟದ ವಾರಿಜಾ ಮತ್ತು ಅಮಿತಾ ಹಾಗೂ ಕೊಳ್ನಾಡು ನೇತ್ರಾವತಿ ಸಂಜೀವಿನಿ  ಒಕ್ಕೂಟದ ಇಂದ್ರಾವತಿ ರಾಷ್ಟ್ರಪತಿಯೊಂದಿಗೆ ಸಂವಾದ ನಡೆಸಲು ಆಯ್ಕೆಯಾಗಿದ್ದಾರೆ.

ರಾಷ್ಟ್ರಪತಿಯವರು ಬುಡಕಟ್ಟು ಜನಾಂಗದ ಸ್ವ-ಸಹಾಯ ಗುಂಪಿನ ಸದಸ್ಯರನ್ನು ಭೇಟಿಯಾಗುವ ಸಲುವಾಗಿ ಹೊಸದಿಲ್ಲಿಯ ರಾಷ್ಟ್ರಪತಿ ಭವನದ ಅಮೃತ ಉದ್ಯಾನವನಕ್ಕೆ ದೇಶದ ಎಲ್ಲೆಡೆಯಿಂದ ಬುಡಕಟ್ಟು ಜನಾಂಗದ ಮಹಿಳೆಯರನ್ನು ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕದಿಂದ 30 ಮಹಿಳೆಯರು ಆಯ್ಕೆಯಾಗಿದ್ದಾರೆ. ಇವರಲ್ಲಿ ದ.ಕ. ಜಿಲ್ಲೆಯಿಂದ ಆಯ್ಕೆಯಾಗಿರುವ ಮೂವರು ಕೂಡಾ ಬಂಟ್ವಾಳ ತಾಲೂಕಿನವರು ಎಂಬುದು ವಿಶೇಷ.

ವಾರಿಜಾ:

ಇವರು ಅಳಿಕೆಯ ಅನುಗ್ರಹ ಸಂಜೀವಿನಿ ಒಕ್ಕೂಟದಲ್ಲಿ ಕಳೆದ ಮೂರು ವರ್ಷಗಳಿಂದ ಎಂಬಿಕೆಯಾಗಿ ಕಾರ್ಯನಿರ್ವಹಿಸುತ್ತಿದ್ದು ಒಕ್ಕೂಟದಿಂದ ಸ್ವ ಉದ್ಯೋಗಕ್ಕೆ ಪ್ರೇರಣೆ ಪಡೆದವರು. ಕೃಷಿ ಸಹಿತ ಮಲ್ಲಿಗೆ ಕೃಷಿಯಲ್ಲೂ ತೊಡಗಿಸಿಕೊಂಡಿರುವ ಇವರು ಆಡು ಸಾಕಣೆ, ಕೋಳಿ ಸಾಕಣೆಯಲ್ಲೂ ತೊಡಗಿಸಿಕೊಂಡಿದ್ದಾರೆ.

ಅಮಿತಾ

ಕನ್ಯಾನ ಕೆಪಿಎಸ್ ವಿದ್ಯಾಸಂಸ್ಥೆಯಲ್ಲಿ ಅತಿಥಿ ಶಿಕ್ಷಕಿಯಾಗಿರುವ ಇವರು ಅಣಬೆ ಕೃಷಿಯ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದು, ಕುಟುಂಬವು ಮಲ್ಲಿಗೆ ಕೃಷಿ, ಹೈನುಗಾರಿಕೆಯಲ್ಲೂ ಮುಂದಿದೆ.

ಇಂದ್ರಾವತಿ

ಕೊಳ್ನಾಡು ನೇತ್ರಾವತಿ ಒಕ್ಕೂಟದಲ್ಲಿ ಕಳೆದ 20 ವರ್ಷಗಳಿಂದ ತೊಡಗಿಸಿಕೊಂಡಿದ್ದು ಹಪ್ಪಳ, ಸಂಡಿಗೆ ತಯಾರಿಸಿ ಮಾರಾಟ ಮಾಡುವ ಜೊತೆಗೆ ಟೈಲರಿಂಗ್ ವೃತ್ತಿಯನ್ನೂ ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here