ಸಸಿಹಿತ್ಲು ಮೇಳದ ಬಹುಮುಖ ಪ್ರತಿಭೆ ನಲ್ಕ ಜಗದೀಶ ನಿಧನ

0

ಬಂಟ್ವಾಳ : ಸಸಿಹಿತ್ಲು ಮೇಳದ ಬಹುಮುಖ ಪ್ರತಿಭೆಯ ಪದವೀಧರ ಕಲಾವಿದ ನಲ್ಕ ಜಗದೀಶ ( 56 )ಇನ್ನಿಲ್ಲ .

ಒಂದು ತಿಂಗಳ ಹಿಂದೆ ಅಸೌಖ್ಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆ ಸೇರಿದ್ದರು ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಎ.6ರಂದು ಇಹಲೋಕ ತ್ಯಜಿಸಿದರು.

ಕಳೆದ 21 ವರುಷಗಳಿಂದ ಸಸಿಹಿತ್ಲು ಮೇಳದಲ್ಲಿ ಹೆಚ್ಚಾಗಿ ಕಥಾನಾಯಕನ ಪಾತ್ರ ನಿರ್ವಹಿಸುತಿದ್ದರು. ಪೋಷಕ ಪಾತ್ರದಲ್ಲೂ ಸೈ ಎನಿಸಿಕೊಂಡವರು ಭಗವತಿ ಮಹಾತ್ಮೆಯಲ್ಲಿ ಈಶ್ವರನ ಪಾತ್ರ ದೇವಿ ಮಹಾತ್ಮೆಯಲ್ಲಿ ವಿಷ್ಣು, ರಕ್ತಬೀಜ ಪಾತ್ರನಿರ್ವಹಿಸುತಿದ್ದರು. ಮ. ಸಹ ಕಲಾವಿದರಿಗೆ ಅಚ್ಚುಮೆಚ್ಚಿನ ಕಲಾವಿದರಾಗಿದ್ದರು.ಮೃತರು ಮಡದಿ ಹವ್ಯಾಸಿ ಯಕ್ಷಗಾನ ಕಲಾವಿದೆ ಹೇಮಾ, ಹೆಣ್ಣು ಮಗಳು,ಗಂಡು ಮಗುವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here