ಕೈಕಂಬ ಸಮೀಪದ ತಲಪಾಡಿಯಲ್ಲಿ ಪ್ರಪಾತಕ್ಕೆ ಬಿದ್ದ ಬೈಕ್ – ಹಿಂಬದಿ ಸವಾರ ಮೃತ್ಯು

0

ಬಂಟ್ವಾಳ:ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಬೈಕ್ ಒಂದು ಪ್ರಪಾತಕ್ಕೆ ಬಿದ್ದ ಘಟನೆ ಎ.10ರಂದು ನಡೆದಿದೆ. ಘಟನೆಯಲ್ಲಿ ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕಮಂಗಳೂರು ಮೂಲದ ಯುವಕ ಮೃತಪಟ್ಟಿದ್ದಾರೆ. ಯಶೋಧರ (25) ಮೃತಪಟ್ಟ ದುರ್ದೈವಿ ಯುವಕ

ಚಿಕ್ಕಮಗಳೂರು ನಿವಾಸಿಯಾದ ಇವರು ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಯಾಗಿದ್ದು ಮತ್ತು ಅದೇ ಕಂಪೆನಿಯ ಗೆಳೆಯ ಅವಿನಾಶ್‌ ಜೊತೆ ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಬರುತ್ತಿರುವಾಗ ಬಿಸಿರೋಡಿನ ಕೈಕಂಬ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ತಲಪಾಡಿ ಎಂಬಲ್ಲಿ ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಬಿದ್ದು ಬೈಕಿನ ಹಿಂಬದಿಯಲ್ಲಿ ಇದ್ದ ಸಹಸವಾರ ಯಶೋಧರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾರೆ

ಅಪಘಾತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here