ಶಂಭೂರು ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ

0

ಬಂಟ್ವಾಳ: ಕಳೆದ 30 ವರ್ಷಗಳಲ್ಲಿ ಆಗದೆ ಬಾಕಿಯಾಗಿದ್ದ ಗ್ರಾಮಗಳ ಪ್ರತಿ ಸಮಸ್ಯೆಗಳನ್ನು ಬಗೆಹರಿಸಲು ಐದು ವರ್ಷಗಳಲ್ಲಿ ಶಕ್ತಿ ಮೀರಿ ಪ್ರಯತ್ನ ಮಾಡಿದ್ದು, ಜನರಿಗೆ ತೃಪ್ತಿ ತಂದಿದೆ ಎಂಬ ವಿಶ್ವಾಸ ನನಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.


ಅವರು ಶಂಭೂರು ಮಹಾಶಕ್ತಿ ಕೇಂದ್ರದ ಕೇಶವ ಎಂಬವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಮಂಡಲದ ಅದ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ಶಂಭೂರು ಗ್ರಾಮದ ಅನೇಕ ವರ್ಷಗಳ ಬೇಡಿಕೆಯನ್ನು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಈಡೇರಿಸುವ ಕೆಲಸ ಮಾಡಿದ್ದಾರೆ, ಅವರ ಮುಂದಿನ ಚುನಾವಣೆಯಲ್ಲಿ ಮತ್ತೆ ಅವರನ್ನು ಅಧಿಕ ಅಂತರದ ಮತದಾನಗಳಿಂದ ಜಯಗಳಿಸಲು ಬೆಂಬಲ ನೀಡಲು ಮನವಿ ಮಾಡಿದರು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಆನಂದ ಶಂಭೂರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಕ್ಷೇತ್ರದ ಯುವಮೋರ್ಚಾದ ಅದ್ಯಕ್ಷ ಕಿಶೋರ್ ಪಲ್ಲಿಪಾಡಿ, ಶಂಭೂರು ಭಾಗದ ಪ್ರಭಾರಿ ಸೀತಾರಾಮ,ಚುನಾವಣಾ ವಿಸ್ತಾರಕ್ ನವೀನ್ ಅಯೋಧ್ಯಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here