ಕೊನೆಗೂ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ಬಂಟ್ವಾಳ ಬಾಜಪ ಅಭ್ಯರ್ಥಿ ರಾಜೇಶ್‌ ನಾಯಕ್‌ ಉಳಿಪ್ಪಾಡಿ

0

ಬಂಟ್ವಾಳ:ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಕೊನೆಗೂ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಬಂಟ್ವಾಳದಿಂದ ಹಾಲಿ ಶಾಸಕ ರಾಜೇಶ್ ನಾಯಕ್‌ ಮರು ಆಯ್ಕೆಯಾಗಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರಿಗೆ ಅವಕಾಶ ನೀಡಲಾಗಿದೆ.ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಅವಕಾಶ ನಿರಾಕರಣೆಯಾಗಿದೆ.ಸುಳ್ಯ ಕ್ಷೇತ್ರದಿಂದ ಹಾಲಿ ಶಾಸಕ, ಸಚಿವರೂ ಆಗಿರುವ ಎಸ್.ಅಂಗಾರ ಅವರನ್ನು ಕೈಬಿಟ್ಟು ಮಾಜಿ ಜಿ.ಪಂ.ಸದಸ್ಯೆ ಭಾಗೀರಥಿ ಮುರುಳ್ಯ ಅವರಿಗೆ ಅವಕಾಶ ನೀಡಲಾಗಿದೆ. ಮತ್ತು ಬೆಳ್ತಂಗಡಿಯಿಂದ ಹಾಲಿ ಶಾಸಕ, ಪುತ್ತೂರು ಮೂಲದ ಹರೀಶ್ ಪೂಂಜ ಅವರಿಗೇ ಮತ್ತೆ ಅವಕಾಶ ನೀಡಲಾಗಿದೆ.ಏ.11ರಂದು ರಾತ್ರಿ ದೆಹಲಿಯಲ್ಲಿ ಪಟ್ಟಿ ಬಿಡುಗಡೆ ಮಾಡಲಾಗಿದೆ.ಮೊದಲ ಹಂತದಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.ಪುತ್ತೂರು, ಸುಳ್ಯ ಸೇರಿದಂತೆ ಮೊದಲ ಪಟ್ಟಿಯಲ್ಲಿ 8 ಜನ ಮಹಿಳೆಯರಿಗೆ ಅವಕಾಶ ನೀಡಲಾಗಿದೆ.

LEAVE A REPLY

Please enter your comment!
Please enter your name here