ಬಂಟ್ವಾಳ ಶಾಸಕ ರಾಜೇಶ್‌ ನಾಯಕ್‌ ರಿಂದ ನಾಮಪತ್ರ ಸಲ್ಲಿಕೆಗೆ ಪೊಳಲಿಯಿಂದ ಪಾದಯಾತ್ರೆ

0

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ರಾಜೇಶ್ ನಾಯ್ಕ್ ಅವರು ಎ.15ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ಬಳಿಕ ನಾಮಪತ್ರ ಸಲ್ಲಿಕೆಗೆ ಪಾದಯಾತ್ರೆ ಮೂಲಕ ಬಿ.ಸಿ.ರೋಡಿನ ಬಂಟ್ವಾಳ ಆಡಳಿತ ಸೌಧಕ್ಕೆ ಹೆಜ್ಜೆ ಹಾಕಿದರು.

ವಿಧಾನಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸಹಿತ ಬಿಜೆಪಿಯ ವಿವಿಧ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here