ಫಾಝೀಲ್ ಹತ್ಯೆ ಪ್ರಕರಣ: 6 ಆರೋಪಿಗಳ ಬಂಧನ

0

ಮಂಗಳೂರು: ಇಲ್ಲಿನ ಸುರತ್ಕಲ್ ನಲ್ಲಿ ಜು.28ರಂದು ರಾತ್ರಿ ನಡೆದ ಮಂಗಳಪೇಟೆ ನಿವಾಸಿ ಫಾಝೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಜಪೆ ಕೊಂಚಾರು ನಿವಾಸಿ ಸುಹಾಸ್ ಶೆಟ್ಟಿ(29), ಕಾವಿನ ಕಲ್ಲು ಕುಳಾಯಿ ನಿವಾಸಿ ಮೋಹನ್(26), ವಿದ್ಯಾನಗರ ಕುಳಾಯಿ ನಿವಾಸಿ ಗಿರಿಧರ(23), ಕಾಟಿಪಳ್ಳ ನಿವಾಸಿಗಳಾದ ಶ್ರೀನಿವಾಸ್(23), ದೀಕ್ಷಿತ್(21) ಮತ್ತು ಅಭಿಷೇಕ್ (21) ಬಂಧಿತರು. ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.
ಆರೋಪಿಗಳು ಜು.26ರಂದು ರಾತ್ರಿ ಹತ್ಯೆಗೈಯಲು ಸಂಚು ರೂಪಿಸಿದ್ದು, ಜು.28ರಂದು ಫಾಝಿಲ್ ನನ್ನು ಗುರಿಯಾಗಿಸಿ ಹತ್ಯೆಗೈದಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಫಾಝೀಲ್ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆಯಾದರೂ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಹತ್ಯೆಗೈದ ಆರು ಆರೋಪಿಗಳು
ದುಷ್ಕರ್ಮಿಗಳಿಗೆ ಕಾರು ಬಾಡಿಗೆ ನೀಡಿದವರು

ಕೃತ್ಯವೆಸಗಲು ಆರೋಪಿಗಳಿಗೆ ಕಾರು ಬಾಡಿಗೆಗೆ ನೀಡಿದ ಅಜಿತ್ ಕ್ರಾಸ್ತಾ ಹಾಗೂ ಇಯಾನ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here