ಬಂಟ್ವಾಳ : ವಕೀಲರ ಸಂಘ ಬಂಟ್ವಾಳ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ವಕೀಲರ ಸಂಘ ಬಂಟ್ವಾಳದಲ್ಲಿ ವಿಶ್ವ ಭೂ ದಿನಾಚರಣೆಯನ್ನು ಎ 28 ರಂದು ಆಚರಿಸಲಾಯಿತು.

ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಷರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳದ ಕಾರ್ಯದರ್ಶಿ ಚಂದ್ರಶೇಖರ ತಳವಾರ ಇವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿವಪ್ರಕಾಶ್ ಜೈನ್ ಪ್ರಕೃತಿಯ ರಕ್ಷಣೆಗೆ ನಾವು ಯಾವ ಮುಂಜಾಗ್ರತೆ ಮಾಡಬೇಕು ಮತ್ತು ಪಕೃತಿಯ ರಕ್ಷಣೆಗೆ ನಮ್ಮ ಕರ್ತವ್ಯವೇನು ಎಂಬ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತ ಎಂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸರಕಾರಿ ಅಭಿಯೋಜಕಿ ಹರಿಣಿ, ವಕೀಲರ ಸಂಘದ ಹಿರಿಯ ಕಿರಿಯ ವಕೀಲ ಮಿತ್ರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.