ಆರ್‌ಎಸ್‌ಎಸ್ ಪುತ್ತೂರು ಜಿಲ್ಲಾ ಸಂಘಚಾಲಕ್‌ ಕೊಡ್ಮಣ್‌ ಕಾಂತಪ್ಪ ಶೆಟ್ಟಿ ನಿಧನ

0

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘಚಾಲಕ್‌ ಆಗಿ ಜವಬ್ದಾರಿ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ಕೊಡ್ಮಣ್‌ ನಿವಾಸಿ ಕಾಂತಪ್ಪ ಶೆಟ್ಟಿ ಕೊಡ್ಮಣ್‌(61.ವ) ಇಂದು(ಮೇ.22) ಮಧ್ಯಾಹ್ನ ಆ ನಿಧನರಾಗಿದ್ದಾರೆ.

ಮೃತರು ಪತ್ನಿ ಸುಲೋಚನ ಮತ್ತು ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

ಭಾರತೀಯ ಮಜ್ದೂರ್ ಸಂಘದಲ್ಲಿ ಮೂರು ವರ್ಷಗಳ ಕಾಲ ಪೂರ್ಣಾವಧಿಯಾಗಿ, ವಿಟ್ಲ ವಿಧಾನಸಭಾ ಕ್ಷೇತ್ರವಾಗಿದ್ದಾಗ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ 3 ವರ್ಷ ಮತ್ತು ಅಧ್ಯಕ್ಷರಾಗಿ ಒಂದು ವರ್ಷ ಕಾರ್ಯನಿರ್ವಹಿಸಿದ್ದರು. ಸುಮಾರು 15 ವರ್ಷಗಳ ಕಾಲ ಮೇರಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು. ನಂತರದ ದಿನಗಳಲ್ಲಿ 3 ವರ್ಷಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ತಾಲೂಕು ಸಂಘಚಾಲಕರಾಗಿ, ಕಳೆದ ಆರು ವರ್ಷಗಳಿಂದ ಪುತ್ತೂರು ಜಿಲ್ಲಾ ಸಂಘಚಾಲಕರಾಗಿ ಕರ್ತವ್ಯ ನಿಭಾಯಿಸುತ್ತಿದ್ದರು.

LEAVE A REPLY

Please enter your comment!
Please enter your name here