ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ನೂತನ ಸ್ವಸಹಾಯ ಸಂಘ ʼಸಿಂಧು’ ಉದ್ಘಾಟನೆ

0

ಕಲ್ಲಡ್ಕ: (ಜೂ.15) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ನೂತನ ಸ್ವಸಹಾಯ ಸಂಘ ʼಸಿಂಧು’ ಇದರ ಉದ್ಘಾಟನಾ ಕಾರ್ಯಕ್ರಮ ವೀರಕಂಬ ಸೇವಾಕೇಂದ್ರದಲ್ಲಿ ಜರಗಿತು.


ವೀರಕಂಬ ಒಕ್ಕೂಟ ಅಧ್ಯಕ್ಷೆ ಶಾಂಭವಿ ಆಚಾರ್ಯ ದೀಪ ಬೆಳಗಿಸಿ ಸಂಘವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ನೂತನ ಸಂಘಕ್ಕೆ ನಿರ್ಣಯ ಪುಸ್ತಕವನ್ನು ಹಸ್ತಾಂತರಿಸಿ ಸಂಘದ ನೀತಿ ನಿಯಮ ನಡಾವಳಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಸಂಘದ ಅಧ್ಯಕ್ಷರಾಗಿ ಮಹಮ್ಮದ್ ಮುಸ್ತಫಾ, ಕಾರ್ಯದರ್ಶಿಯಾಗಿ ವೇಣುಗೋಪಾಲ್, ಖಜಾಂಜಿಯಾಗಿ ಜೀವನ್ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ವೀರಕಂಬ ಒಕ್ಕೂಟದ ಕಾರ್ಯದರ್ಶಿ ಪದ್ಮಾವತಿ, ಸೇವಾ ಕೇಂದ್ರದ ವಿ ಎಲ್ ಸೌಮ್ಯ, ನೂತನ ಗುಂಪಿನ ಸದಸ್ಯರು ಉಪಸ್ಥಿತರಿದ್ದರು. ಒಕ್ಕೂಟದ ಸೇವಾ ಪ್ರತಿನಿಧಿ ವಿಜಯ ಶೇಖರ್ ಸ್ವಾಗತಿಸಿ, ಶಿವರಂಜಿನಿ ವಂದಿಸಿದರು.

LEAVE A REPLY

Please enter your comment!
Please enter your name here