ತುಂಬೆ ಐಟಿಐಯಲ್ಲಿ ಬಿ.ಎ ಸಂಗಮ

0

ಬಂಟ್ವಾಳ ತುಂಬೆ ಬಿ.ಎ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬಿ.ಎ ಸಂಗಮ ಕಾರ್ಯಕ್ರಮ ನಡೆಯಿತು. 2023-24ನೇ ವರ್ಷಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ ತರಬೇತಿ ಪೂರೈಸಿದ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಡಾ. ಸರೋಜಿನಿ ಆಚಾರ್ ಮಾತನಾಡಿ ಪ್ರಯತ್ನದ ಮೂಲಕ ಯಶಸ್ಸನ್ನು ಸಾಧಿಸಿ ತಾಂತ್ರಿಕ ಶಿಕ್ಷಣದ ಮೂಲಕ ಪರಿಪೂರ್ಣ ಜೀವನ ಸಾಗಿಸಲು ಕರೆ ನೀಡಿದರು.

ಮುಖ್ಯ ಅತಿಥಿ Senior Learning Consultant ಸೈಯ್ಯದ್ ಅಲ್ತ್‌ಫ್ ಸಿ ಬಿ.ಎ ಕೈಗಾರಿಕಾ ತರಬೇತಿ ಸಂಸ್ಥೆ ಬಡವರ ಪಾಲಿಗೆ ವರದಾನವಾಗಿದೆ ಎಂದು ಅಭಿಪ್ರಾಯಪಟ್ಟರು.

ಮೆಲ್ಕಾರ್ ಎಮಿನೆಂಟ್ ವಿದ್ಯಾ ಸಂಸ್ಥೆ ಸ್ಥಾಪಕರು ಮತ್ತು ಪ್ರಾಚಾರ್ಯ ಮಹಮ್ಮದ್ ಇರ್ಶಾದ್ ಭಾಗವಹಿಸಿ ರಾಪ್ಟ್ರೀಯ ಸೇವಾ ಯೋಜನೆಯ ಮೂಲಕ ಅಪಾರ ಅನುಭವ ಹೊಂದಿದ ಬಿ.ಎ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿ ತಂಡ ಸಾರ್ವಜನಿಕರ ಪ್ರೀತಿಗೆ ಪಾತ್ರವಾಗಿದ್ದು ತಾಂತ್ರಿಕ ತರಬೇತಿ ಪಡೆದ ನುರಿತ ವಿದ್ಯಾರ್ಥಿಗಳಾದ ತಾವುಗಳು ಸಾಮಾಜಿಕ ಕಳಕಳಿಯಿಂದ ಹೆತ್ತವರ ಬೇಡಿಕೆಯನ್ನು ಪೂರೈಸಲು ಸಲಹೆ ಇತ್ತರು.

ತುಂಬೆ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಗಂಗಾಧರ ಆಳ್ವ ಇವರು ಮಾತನಾಡಿ ಬಿ ಎ ಕೈಗಾರಿಕಾ ತರಬೇತಿ ರಾಪ್ಟ್ರೀಯ ಸೇವಾ ಯೋಜನೆಯ ಸಾಧನೆಗಳು ಆಡಳಿತ ಮಂಡಳಿ ಪ್ರಾಚಾರ್ಯರು ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳ ನಿಸ್ವಾರ್ಥ ಸೇವೆಯನ್ನು ಅಬಿನಂದಿಸಿದರು.

ಎಂ. ಆರ್. ಪಿ. ಎಲ್ ನಿವೃತ್ತ ವ್ಯವಸ್ಥಾಪಕ ಸದಾಶಿವ ಡಿ ತುಂಬೆ ಮಾತನಾಡಿ ಜಾಗತಿಕ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿ, ಸಂಸ್ಥೆಯ ಅತ್ಯಂತ ಯಶಸ್ವೀ ನಿರ್ವಹಣೆ ಮತ್ತು ಅಭಿವೃದ್ಧಿ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ತುಂಬೆ ಮುಹಿಯುದ್ದೀನ್ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಅಧ್ಯಕ್ಷತೆ ವಹಿಸಿದ್ದರು. ಐಟಿಐ ಕಾಲೇಜಿನ ಪ್ರಾಚಾರ್ಯ ನವೀನ್ ಕುಮಾರ ಕೆ. ಎಸ್. ಪ್ರಾಸ್ತಾವಿಕ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಿರಿಯ ತರಬೇತಿ ಅಧಿಕಾರಿ ರವಿ ವಂದಿಸಿ, ರಾಜೇಶ್ ಟಿ. ಕಾರ್ಯಕ್ರಮ ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here