ಕಡೇಶಿವಾಲಯ ರೋಟರಿ ಸಮುದಾಯ ದಳದಿಂದ ಸ್ವಾತಂತ್ರ್ಯ ದಿನಾಚರಣೆ

0

ಕಡೇಶಿವಾಲಯ: ರೋಟರಿ ಸಮುದಾಯ ದಳ ಕಡೇಶಿವಾಲಯ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇವುಗಳ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ, ವನಮಹೋತ್ಸವ ಕಾರ್ಯಕ್ರಮ ಮತ್ತು ಕಟ್ಟಡದ ಉದ್ಘಾಟನಾ ಸಮಾರಂಭ ಗ್ರಾಮೀಣ ರೋಟರಿ ಭವನ ಇಲ್ಲಿ ನಡೆಯಿತು .


ಧ್ವಜಾರೋಹಣವನ್ನು ವನದುರ್ಗ ದೇವಸ್ಥಾನ ದೇಂತಡ್ಕ ಪ್ರಧಾನ ಅರ್ಚಕ ವಡ್ಯ ನಾರಾಯಣ ಭಟ್ ನೆರವೇರಿಸಿದರು.


ಸಭಾಕಾರ್ಯಕ್ರಮದ ಸಭಾಧ್ಯಕ್ಷರಾಗಿ ರೋ|PHF ಪ್ರಕಾಶ್ ಬಾಳಿಗ ವಹಿಸಿದ್ದರು, ವಿಸ್ಕೃತ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೆರ್ನೆ ವಲಯದ ಮೇಲ್ವಿಚಾರಕಿ ಶಾರದಾ ಉದ್ಘಾಟಿಸಿದರು. ಕಡೇಶಿವಾಲಯ ಗ್ರಾಮ ಪಂಚಾಯತ ನ ಸದಸ್ಯ ಹರಿಶ್ಚಂದ್ರ ಭಂಡಾರಿ ಕಾಡಬೆಟ್ಟು, ರೋಟರಿ ಕ್ಲಬ್ ಬಂಟ್ವಾಳ ಇದರ ಕಾರ್ಯದರ್ಶಿ ರೊ.ಸದಾಶಿವ ಬಾಳಿಗ ಮತ್ತು ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್.ರಾವ್, ರೋಟರಿ ಸಮುದಾಯ ದಳದ ಅಧ್ಯಕ್ಷ ಕಿಶೋರ್ ಕುಮಾರ್ ಬಿ, ಕಾರ್ಯದರ್ಶಿ ಝಹೀರ್ ಪ್ರತಾಪನಗರ ಉಪಸ್ಥಿತರಿದ್ದರು.

ಕಡೇಶಿವಾಲಯ ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಿಗೆ ಸಿಹಿತಿಂಡಿ ವಿತರಿಸಲಾಯಿತು.
ರೋಟರಿ ಸಮುದಾಯ ದಳ ಕಡೇಶಿವಾಲಯದ ಚೇರ್ ಮ್ಯಾನ್ ಕೆ. ಕೆ. ಶೆಟ್ಟಿ ಕುರುಂಬ್ಲಾಜೆ ಸ್ವಾಗತಿಸಿ,ದಳದ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ನಾಯ್ಕ್ ಡಿ ವಂದಿಸಿದರು,ಪೂವಪ್ಪ ಮುಂಡಾಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here