ಅಮಿತ್ ಶಾ ಭೇಟಿ ಮಾಡಿದ ನಳಿನ್ ಕುಮಾರ್

0

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರವರು ಆ.೩ರಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ರವರನ್ನು ಭೇಟಿ ಮಾಡಿ ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಇವರ ಪ್ರಕರಣವನ್ನು ಎನ್ ಐ ಎ ವಹಿಸಿಕೊಂಡಿರುವುದಕ್ಕೆ ಧನ್ಯವಾದ ಸಮರ್ಪಿಸಿದರು. ಬಳಿಕ ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ವಿನಂತಿಸಿದರು.


ಈ ಸಂದರ್ಭದಲ್ಲಿ ಗೃಹ ಸಚಿವರು ರಾಜ್ಯದಲ್ಲಿ ಎನ್ ಐ ಎ ಯನ್ನು ಬಲಗೊಳಿಸುವುದರೊಂದಿಗೆ ಎನ್ ಐ ಎ ಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿಣ ಸಂದೇಶವನ್ನು ನೀಡಲಾಗುವುದು ಮತ್ತು ಎನ್ ಐ ಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here