ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ಜಿಲ್ಲಾ ಪ್ರಬುದ್ಧರ ಪ್ರಕೋಷ್ಟದ ಸಂಚಾಲಕರ ಭೇಟಿ

0

ಸಚಿವ ಮುರುಗೇಶ್ ನಿರಾಣಿ ನೀಡಿದ ರೂ.5 ಲಕ್ಷ ನೆರವು ಹಸ್ತಾಂತರ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬಿಜಿಪಿ ಜಿಲ್ಲಾ ಪ್ರಬುದ್ಧರ ಪ್ರಕೋಷ್ಟದ ಸಂಚಾಲಕ ದಿವಾಕರ ಸಾಮಾನಿ ಭೇಟಿ ನೀಡಿ ಸಾಂತ್ವನ ಹೇಳಿದರು.

ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿದೇಶ ಪ್ರಯಾಣದಲ್ಲಿರುವ ಕಾರಣ ಅವರು ನೀಡಿದ ರೂ.,5 ಲಕ್ಷ ನೆರವು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸುಖೇಶ್ ಇರಾ, ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಯಾನಂದ್, ಸುರೇಶ್ ಶೆಟ್ಟಿ ಸೂರಿಂಜೆ, ಸುಪ್ರೀತ್ ಇರಾ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here