ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿ ಮೃತ್ಯು

0

ಬಂಟ್ವಾಳ: ಆ.9ರಂದು ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕು ಮಾಣಿ ಸಮೀಪದ ಬರಿಮಾರು ಗ್ರಾಮದ ಕಾಗೆಕಾನದಲ್ಲಿ ನದಿಗೆ ಬಿದ್ದಿದ್ದ ಬರಿಮಾರು ಪಾಪೆತ್ತಿಮಾರ್ ನಿವಾಸಿ ರಕ್ಷಣ್‌ ಅವರನ್ನು ತಕ್ಷಣ ಸಾರ್ವಜನಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಗಂಭೀರ ಸ್ಥಿತಿಯಲ್ಲಿದ್ದ ರಕ್ಷಣ್‌ ಚಿಕಿತ್ಸೆಗೆ ಸ್ಪಂದಿಸದೆ ಆ.10ರಂದು ಮೃತಪಟ್ಟಿದ್ದಾರೆ.
ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದ ರಕ್ಷಣ್ ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿತ್ತು.

LEAVE A REPLY

Please enter your comment!
Please enter your name here